"ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೇ ಭಾಷೆ ಕನ್ನಡ ಕನ್ನಡ ಕಸ್ತೂರಿ ಕನ್ನಡ" 💛❤
★ Movie Updates ✅
★ Movie Reviews ✅
★ Celebrities Shows ✅
★ Kannada News ✅
★ Public Reviews ✅
★ Politics ✅
For any enquiries, Movie Promotions & Advertising Contact us at email ID : sanjithsanju371@gmail.com
*Please watch, like, comment, share & Subscribe*
*VS*
STAR PICTURE
Aa Ee ( ಆ ಈ ) Kannada Movie Muhurtha & Press Meet Video | Starpicture |
7 hours ago | [YT] | 5
View 0 replies
STAR PICTURE
Raashi (ರಾಶಿ) Kannada Movie Poster Launch Event & Pressmeet | Adithya Shashikumar | Starpicture |
8 hours ago | [YT] | 9
View 0 replies
STAR PICTURE
ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ "ರಾಶಿ" ಉಡುಗೊರೆ
ಹಲವು ಗಣ್ಯರಿಂದ ಶೀರ್ಷಿಕೆ ಅನಾವರಣ
ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸುಂದರ ಪ್ರೇಮ ಕಥಾನಕಕ್ಕೆ "ರಾಶಿ" ಎಂದು ಹೆಸರಿಡಲಾಗಿದೆ. ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ನಟ ಶಶಿಕುಮಾರ್, ಬೆಂಗಳೂರು ಪೊಲೀಸ್ ಉಪ ಆಯುಕ್ತರಾದ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಎಸ್ ಚಿದಂಬರ್ ಸೇರಿದಂತೆ ಮುಂತಾದ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ ಎಂದು ಮಾತನಾಡಿದ ನಾಯಕ ಆದಿತ್ಯ ಶಶಿಕುಮಾರ್, ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದರು.
ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಅವರು ನನ್ನನ್ನು ಕರೆದು ಈ ಚಿತ್ರವನ್ನು ನಿರ್ದೇಶಿಸಬೇಕೆಂದರು. ಅಖಿಲೇಶ್ ಅವರೆ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. "ಟ್ರಿಗರ್" ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಇನ್ನು ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ವಿಜಯ್ ಪಾಳೇಗಾರ್ ತಿಳಿಸಿದರು.
ಚಿತ್ರದ ನಾಯಕಿ ಸಮೀಕ್ಷ, ನಿರ್ಮಾಪಕ ಅಖಿಲೇಶ್, ಕಲಾವಿದರಾದ ಕರಿಸುಬ್ಬು, ಉಗ್ರಂ ರವಿ, ಹುಲಿ ಕಾರ್ತಿಕ್ ಮುಂತಾದವರು "ರಾಶಿ" ಚಿತ್ರದ ಬಗ್ಗೆ ಮಾತನಾಡಿದರು.
9 hours ago | [YT] | 331
View 4 replies
STAR PICTURE
Raja Deva Sindu (ರಾಜ ದೇವ ಸಿಂದು) Kannada Movie Pressmeet Video| Bhargav,Shwetha,Chawasuki,Aara,Monika
9 hours ago | [YT] | 1
View 0 replies
STAR PICTURE
ಬೈರಾದೇವಿ 💥❤😍
21 hours ago | [YT] | 681
View 2 replies
STAR PICTURE
❤😍
1 day ago | [YT] | 5,099
View 10 replies
STAR PICTURE
ಚಿನ್ನು ಗೊಂಬೆ 💥❤
1 day ago | [YT] | 1,284
View 8 replies
STAR PICTURE
ಡಿಬಾಸ್ ನಗು ❤😍
1 day ago | [YT] | 6,130
View 16 replies
STAR PICTURE
ಬೇಗೂರು ಕಾಲೋನಿಗೆ 'ಭೀಮ' ಬಲ..ರಾಜೀವ್ ಸಿನಿಮಾಗೆ ಸಾಥ್ ಕೊಟ್ಟ ದುನಿಯಾ ವಿಜಯ್ ಕುಮಾರ್
ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ನಲ್ಲಿ 'ಬೇಗೂರು ಕಾಲೋನಿ'..ರಾಜೀವ್ ಹನು ಚಿತ್ರಕ್ಕೆ ಭೀಮ ಬೆಂಬಲ
ಕನ್ನಡ ಚಿತ್ರರಂಗಕ್ಕೆ ಬಲ ತುಂಬಿರುವ ಭೀಮ ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರ್ತಾರೆ. ದುನಿಯಾ ವಿಜಯ್ ಕುಮಾರ್ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಹೊಸ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ. ಫ್ಲೈಯಿಂಗ್ ಕಿಂಗ್ ಮಂಜು ಕಥೆ ಬರೆದು ನಿರ್ದೇಶಿಸಿರುವ 'ಬೇಗೂರು ಕಾಲೋನಿ' ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ ಎನ್ ಸುರೇಶ್ , ಖ್ಯಾತ ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಮತ್ತಿತರರು ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಈ ವೇಳೆ ನಟ ಕಂ ನಿರ್ಮಾಪಕ ವಿಜಯ್ ಕುಮಾರ್ ಮಾತನಾಡಿ, ನಿರ್ಮಾಪಕರು ನಮ್ಮ ಊರಿನ ಕಡೆಯವರು. ನಮ್ಮದು ಅಂತಾ ಸೆಳೆಯುತ್ತದೆ. ನಿರ್ಮಾಪಕ ಹಾಗೂ ನಿರ್ದೇಶಕ ಮಂಜು ಅವರಿಗೆ ಒಳ್ಳೆದಾಗಲಿದೆ. ಮಂಜು ಗೌರವ ಕೊಡ್ತೀಯಾ ಎನ್ನುವುದಕ್ಕಿಂತ. ಹೋರಾಟದ ಶಕ್ತಿ ಕಾಡ್ತಿದೆ. ನ್ಯಾಯಾ ಕೇಳಲಿ ಎಲ್ಲಿ ಕೇಳಲಿ, ಜಾತಿ ಭೇದ ಮತ ನೊಂದವರಿಗಾಗಿ ಆದ ಅನ್ಯಾಯ ಎಂದು ಎದೆ ತಟ್ಟಿಕೊಂಡು ನಿಲ್ಲವರು ಎಂದುಕೊಂಡಿದ್ದೇನೆ. ಮಂಜು ಅವರಲ್ಲಿ ಇದನ್ನು ಕಂಡೆ. ಹೋರಾಟ ಇಟ್ಕೊಂಡು ಮಾಡಿರುವ ಕಥೆ ಬೇಗೂರು ಕಾಲೋನಿ ಎನಿಸುತ್ತದೆ, ಈ ಹೋರಾಟದ ಕಥೆ ಸರ್ಕಾರಕ್ಕೆ ಮುಟ್ಟಲಿ,. ಕಾಲೋನಿ ಇಲ್ಲದೇ ನಗರ ಆಗಲ್ಲ. ಕಾಲೋನಿ ಶಕ್ತಿ ಶಕ್ತಿಯೇ. ಮಾಲ್ ನಗರ ಆಗುವುದು ಕಾಲೋನಿಯಿಂದ, ಕಾಲೋನಿಯವರು ಕಾಲಿಗೆ ಸಮ ಅಲ್ಲ. ಅವರಿಂದನೇ ಎಲ್ಲಾ. ಕಾಲೋನಿಯವರು ಮೊದಲು ಸಿನಿಮಾ ನೋಡಿ ಆಮೇಲೆ ಮಾಲ್ ನವರು ಬಂದು ನೋಡ್ತಾರೆ. ರಾಜೀವ್ ಕ್ರಿಕೆಟ್ ಆಡುವುದು ನಟನೆಯಲ್ಲಿ ಪೋರ್ಸ್ ಇದೆ. ಆದರೆ ಕರೆಕ್ಟ್ ಟೈಮ್ ನಲ್ಲಿ ಬರ್ತಿಲ್ಲ. ರಾಜೀವ್ ಹಾರ್ಡ್ ವರ್ಕರ್. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.
ನಿರ್ದೇಶಕ ಫ್ಲೈಯಿಂಗ್ ಮಂಜು ಮಾತನಾಡಿ, ಕಾಲೋನಿ ಸೊಸೈಟಿ, ಎಲ್ಲಾ ರೀತಿ ಜನ ವಾಸ ಮಾಡ್ತಾರೆ. ಅಲ್ಲಿ ನಡೆಯುವ ಒಂದು ಸಣ್ಣ ಕಥೆ ಕಾಲೋನಿ. ಇದು ಹೋರಾಟದ ಕಥೆ. ಇದರಲ್ಲಿ ಫೈಟ್ಸ್ ಚೆನ್ನಾಗಿ ಮಾಡಿದ್ದರೆ ಆ ಕ್ರೆಡಿಟ್ ವಿಜಯ್ ಅಣ್ಣನಿಗೆ ಹೋಗಲಿ. ನನ್ನ ಸಣ್ಣ ನಿರ್ದೇಶಕನಿಗೆ ವಿಜಯ್ ಅಣ್ಣ ಸಾಥ್ ಕೊಟ್ಟಿದ್ದು ನಾನು ಎಂದಿಗೂ ಮೆರಯುವುದಿಲ್ಲ ಎಂದರು.
ನಟ ರಾಜೀವ್ ಹನು ಮಾತನಾಡಿ, ಫ್ಲೈಕಿಂಗ್ ಮಂಜು ನನಗೆ ಸತತ 15 ವರ್ಷಗಳ ಪರಿಚಯ. ಅವತ್ತಿನಿಂದ ಮಂಜು ಪರಿಚಯ. ತನಗೆ ಏನು ಬೇಡ. ಹೊಟ್ಟೆ ತುಂಬಿದರೆ ಸಾಕು ಎಂದು ಕೆಲಸ ಮಾಡುವ ವ್ಯಕ್ತಿ,. ಆ ಕೆಲಸ ಪರದೆಯ ಮೇಲೆ ಕಾಣುತ್ತಿದೆ. ಇವತ್ತು ಇಷ್ಟು ಜನ ಒಟ್ಟುಗೂಡಿಸುವ ಕೆಲಸ ಕೂಡ ಅವರದ್ದು ಹಾಗೂ ನಿರ್ಮಾಪಕರದ್ದು. ರಾಜೀವ್ ರಾಘವನಾಗಿ ನಿಂತುಕೊಳ್ತಾನೆ ಎಂಬ ನಂಬಿಕೆ ಇದೆ ಎಂದರು.
ಆನಂದ್ ಅಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೇಗೂರು ಕಾಲೋನಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬರುವ ಎಲ್ಲಾ ಪಾತ್ರಧಾರಿಗಳನ್ನು ಈ ವಿಡಿಯೋದಲ್ಲಿ ಪರಿಚಯಿಸಲಾಗಿದ್ದು, ಇನ್ನೇನು ಶೀಘ್ರದಲ್ಲೇ ಚಿತ್ರತಂಡ ಟೀಸರ್ ರಿಲೀಸ್ ಮಾಡುವ ನಿರೀಕ್ಷೆಯಲ್ಲಿದೆ.
ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಬ್ಯಾನರ್ ನಲ್ಲಿ ಎಂ ಶ್ರೀನಿವಾಸ್ ಬಾಬು ನಿರ್ಮಾಣ ಮಾಡಿದ್ದು, ರಾಜೀವ್ ಹನು ಸೇರಿದಂತೆ ಫೈಯಿಂಗ್ ಕಿಂಗ್ ಮಂಜು, ಪಲ್ಲವಿ ಹರ್ವ, ಕೀರ್ತಿ ಭಂಡಾರಿ, ಪೋಸಾಗ್ನಿ ಕೃಷ್ಣ ಮುರಳಿ, ಬಾಲ ರಾಜವಾಡಿ ಬಣ್ಣ ಹಚ್ಚಿದ್ದಾರೆ. ವಿಜಯ್ ಸೋವರ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಪ್ರಮೋದ್ ತಳವಾರ್ ಸಂಕಲನ, ಹಾಗೂ ಕಾರ್ತಿಕ್ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಚಿತ್ರಕ್ಕಿದೆ.
1 day ago | [YT] | 241
View 3 replies
STAR PICTURE
ಪ್ಯಾನ್ಸ್ ಜೊತೆ ಮಗನ ಬರ್ತ್ಡೆ ಕಣ್ತುಂಬಿಕೊಂಡ ಉಪೇಂದ್ರ ತಾಯಿ | Upendra Birthday Celebration | Starpicture |
1 day ago | [YT] | 3
View 0 replies
Load more